ಸೋಮವಾರ, ಜನವರಿ 4, 2010

ಕರ್ನಾಟಕದಲ್ಲಿ ಪ್ರಳಯ ಆಗಿಹೋಗಿದೆ!!!!!!!!!!!!!

ಹೌದು ನಮ್ಮ ಕರ್ನಾಟಕದಲ್ಲಿ ನಿಜಕ್ಕೂ ಪ್ರಳಯ ಆಗಿಹೋಗಿದೆ!!
ನಿನ್ನೆ ಸಿ.ಅಶ್ವಥ್, ಇಂದು ಡಾII ವಿಷ್ಣುವರ್ಧನ್!!!!!!!
ಬೆಳ್ಳಂಬೆಳಗ್ಗೆ ಮತ್ತೊಂದು ಶಾಕ್! ಅದೇ 'ಸಿಂಹ' ತನ್ನ 'ಘರ್ಜನೆ' ನಿಲ್ಲಿಸಿದೆ..
'ವಂಶವೃಕ್ಷ' ದಿಂದ ಚಿತ್ರ ಅಭಿಯಾನ ಪ್ರಾರಂಭಿಸಿ, 'ನಾಗರಹಾವಿನ' ಬಿಸಿರಕ್ತದ ಯುವಕ, 'ಗಂಧದಗುಡಿ'ಯ ಚಲಬಿಡದ ಸಾಹಸಿ 'ಕರ್ಣ' ದ 'ಕರುಣಾಮಯಿ', 'ಗಂಡುಗಲಿ ರಾಮ' ನಾಗಿ 'ಸಾಹಸಸಿಂಹ' ನಾದ ಈ "ಯಜಮಾನ' ಇಂದು ತನ್ನ ಇಹಲೋಕದ ಪಯಣ ಮುಗಿಸಿದ್ದಾರೆ...

ವಿಷ್ಣು ಸರ್ ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ.......

ನಿಮ್ಮ ಆತ್ಮವೆಂಬ 'ಬಂಗಾರದ ಕಳಶ' ಚಿರವಾಗಿ ಕನ್ನಡಿಗರಾದ ನಮ್ಮೆಲರ ಮನದಲ್ಲಿ ಹೊಳೆಯುತ್ತಿರುತ್ತದೆ
ಮೇರು ನಟನ ಸಾವು ಕನ್ನಡ ಕಲಾ ಜಗತ್ತಿಗೆ ತುಂಬಲಾರದ ನಷ್ಟ!. ನಂಬಲು ಸಾಧ್ಯವಾಗದ ಸುದ್ದಿ ಮನಸಿಗೆ ಆಘಾತ ತಂದಿದೆ. ವಿಷ್ಣು ಕುಟುಂಬಕ್ಕೆ ದು:ಖ ಸಹಿಸಿಕೊಳ್ಳುವ ಶಕ್ತಿ ಪರಮಾತ್ಮನು ನೀಡಲಿ. ಅದ್ಬುತ ಕಲಾವಿದನ ಆತ್ಮಕ್ಕೆ ದೇವರು ಶಾಂತಿ ನೀಡಲಿ.....

ಕೇವಲ ಹಿಂದಿ ಗಾಯಕರಿದ್ದರಷ್ಟೇ ಜನ ಸೇರುತ್ತಾರೆ!! ಎಂದು ಕೊಂಡಿದ್ದ ನಮಗೆ "ಕನ್ನಡವೇ ಸತ್ಯ" ಎಂಬ ಡಿಂಡಿಮ ಭಾರಿಸಿ ಕನ್ನಡಿಗರ ಕನ್ನಡತನವನ್ನು ಬಡಿದೆಬ್ಬಿಸಿದ 'ಗಾನ ಗಾರುಡಿಗ' "ನಮ್ಮ ನಡುವೆ ಇಲ್ಲಾ!!" ಎನ್ನುವುದನ್ನೂ ಕಲ್ಪಿಸಿಕೊಳ್ಳಲೂ ಸಹ ಆಗುತ್ತಿಲ್ಲ
ಅವರ ಹಾಡುಗಳನ್ನು ಕೇಳುತ್ತಾ ಅವರಿಗೆ ಶ್ರದಾಂಜಲಿ ಸಲ್ಲಿಸೋಣ..

ಕಾಮೆಂಟ್‌ಗಳಿಲ್ಲ: