ಶನಿವಾರ, ಫೆಬ್ರವರಿ 20, 2010

'ವೃಕ್ಷ ರಾಜ'ನ ಸ್ವಗತ.....


ಜಕ್ಕೂ ಮರವಾಗಿ ಹುಟ್ಟಲು ಪುಣ್ಯ ಮಾಡಿರಬೇಕು. ಪೂರ್ವಜನ್ಮದ ಸುಕೃತದಿಂದ ನಾನು ಈ ಜನ್ಮದಲ್ಲಿ ಮರವಾಗಿ ಜನಿಸಿದ್ದೀನಿ, ಅದರಲ್ಲೂ ಬೃಹದಾಕಾರವಾಗಿ ಬೆಳೆಯಬಲ್ಲ 'ವೃಕ್ಷಗಳ ರಾಜ' ಆಲದ ಮರವಾಗಿದ್ದೇನೆ.


ವಿಶಾಲ ಆಲದಮರ 'ಗತಕಾಲ

ನೋಡಿ ಎಷ್ಟು ವಿಶಾಲವಾಗಿದ್ದೇನೆ.

ಸುಮಾರು ೧೦೦-೧೫೦ ವರ್ಷಗಳಿರಬಹುದು, ಒಬ್ಬ ಪುಣ್ಯಾತ್ಮನಾದ ರೈತ ಬೇರ್ಯಾವುದೋ ಆಲದ ಮರದಿಂದ ಒಂದು ಸಣ್ಣಕೊಂಬೆ ಕಡಿದು ಅವನ ಹೊಲದಲ್ಲಿ ನನ್ನನ್ನು ನೆಟ್ಟು ಪ್ರತಿಸ್ಠಾಪಿಸಿದ. ದಿನವೂ ನನಗೆ ನೀರೆರೆದು, ಕಾಲಕಾಲಕ್ಕೆ ಆಹಾರ ನೀಡಿ, ಮೇಕೆ ಕುರಿದನಗಳ ದಾಳಿಯಿಂದ ನನ್ನನ್ನು ರಕ್ಷಿಸಿದ ಆ ಮಹಾನುಭಾವ. ಅವನಿಗೆ ನಾನು ಚಿರರುಣಿ.

ನಾನು ನೆಲಕ್ಕೆ ಬೇರೂರಿ ಸುಮಾರು ೧೫ ವರ್ಷವಾದಾಗ ನನ್ನ ಹೊಟ್ಟೆಯ ಮೇಲೆ ಮೊದಲ ಸಣ್ಣ ಪೆಟ್ಟು ಬಿತ್ತು, ಅದೂ ಈ ಊರಿನ ಯುವಪ್ರೇಮಿಗಳಿಂದ, ಯುವಕನು ತನ್ನ ಪ್ರೇಯಸಿಗೆ ತನ್ನ ಪ್ರೇಮ ನಿವೇದಿಸಲು ತನ್ನೀರ್ವರ ಹೆಸರುಗಳನ್ನು ನನ್ನ ಹೊಟ್ಟೆಯ ಮೇಲೆ ಕೆತ್ತಿದಾಕ್ಷಣಕ್ಕೆ ನೋವಾದರು ನನಗೆ ಖುಷಿಯೇ ಆಯಿತು 'ನಾನು ಅವರ ಪ್ರೇಮಕ್ಕೆ ಸಾಕ್ಷಿಯಾದೆನಲ್ಲ' ಎಂದು. ಅವರ ನಂತರ ಅದೆಷ್ಟು ಜೋಡಿ ಜೀವಗಳು ನನ್ನ ನೆರಳ ಕೆಳಗೆ ಪಿಸುಗುಟ್ಟಿದ್ದಾರೆ! ಅದೆಷ್ಟು ಜನ ನನ್ನೆದೆಗೊರಗಿ ತಮ್ಮ ದುಃಖತೋಡಿಕೊಂಡು ಸಾಂತ್ವಾನಪಡೆದುಕೊಂಡರು! ಒಂದೆ ಎರಡೇ ಅವುಗಳನ್ನು ಮೆಲುಕುಹಾಕುತ್ತಿದ್ದರೆ ಅದೆಂತಹ ಮಧುರಾನುಭೂತಿ!! "ನಾನೇನು ಭೂತಾಯಿಗಿಂತಲೂ ಒಂದು ಕೈ ಮೇಲೇನೋ' ಎಂಬ ಅಹಂ ನನ್ನನ್ನು ಆಗಾಗ ಕಾಡುವುದುಂಟು.

ಮತ್ತೆ ನನಗೆ ಸ್ವಲ್ಪಜಾಸ್ತಿ ಅನ್ನುವಷ್ಟು ಏಟು ಬಿದ್ದದ್ದು ನನ್ನನ್ನು ನೆಟ್ಟ ರೈತನಿಂದಲೆ!!! ಹೌದು ಅದೊಂದು ದಿನ ತನ್ನಿಬ್ಬರು ಸ್ನೇಹಿತರೊಡನೆ ಬೆೞಂಬೆಳಿಗ್ಗೆ ಹೊಲಕ್ಕೆ ಬಂದ ರೈತ ನನ್ನ ರೆಂಬೆ ಕೊಂಬೆಗಳನ್ನು ಕತ್ತರಿಸತೊಡಗಿದ. ತುಂಬಾನೇ ನೋವಾಯ್ತು! ಕಡಿಬೇಡಿ! ಕಡಿಬೇಡಿ! ಅಂತ ಕೂಗಿಕೊಂಡೆ. ಆದರೆ ನನ್ನ ಮಾತನ್ನು ಯಾರೂ ಕೇಳಲಿಲ್ಲ. ನನ್ನ ಜೀವನ ಇಲ್ಲಿಗೆ ಸಮಾಧಿಯಾಯ್ತು ಅಂದುಕೊಡೇ ೨ ವಾರ ಕಳೆದೆ. ಆದರೇನಾಶ್ಚರ್ಯ!!!!!!! ಅವರು ಕತ್ತರಿ ಜಾಗದಲ್ಲೇಲ್ಲಾ ಮೊದಲಿದ್ದದ್ದಕ್ಕಿಂತಾ ಹೆಚ್ಚು ಹೆಚ್ಚು ರೆಂಬೆಗಳು ಚಿಗುರೊಡೆಯತೊಡಗಿದವು, ನನ್ನ ಹೊಟ್ಟೆ, ಕೈಕಾಲುಗಳು ಮತ್ತಷ್ಟು ದಪ್ಪವಾಗತೊಡಗಿದವು. ಕೆಲದಿನಗಳ ನಂತರ ನಾನು ಮೊದಲಿಗಿಂತಲೂ ಎತ್ತರೆತ್ತರಕ್ಕೆ ಅಗಲಕ್ಕೆ ಬೆಳೆಯತೊಡಗಿದೆ. ಕುರಿ ಮೇಕೆ ಮೇಯಿಸುವವರು ನನ್ನ ಸಣ್ಣ ಕೊಂಬೆಗಳನ್ನು ಕಡಿದು ಅವುಗಳಿಗೆ ತಿನ್ನಿಸುವಾಗ "ಮಗುವಿಗೆ ಹಾಲುಣಿಸುವ ತಾಯ್ತನವನ್ನು ನನಗೂ ಕರುಣಿಸಿದೆಯಲ್ಲಾ ಭಗವಂತಾ! ನಿನಗೆ ನಾನು ಚಿರರುಣಿ" ಎಂದು ಆ ದಯಾಮಯನಿಗೆ ವಂದಿಸಿದೆ.

ಅಬ್ಭಾ!! ಅದೆಷ್ಟು ವರ್ಷಗಳುರುಳಿದವು ನನ್ನ ಕೊಂಬೆಗಳು ನನಗಿಂತಲೂ ಬಲಿತು "ಬೀಳು"ಗಳ ಚಿಗುರಿಸಲು. ಮೊದಲ ಬೀಳು ಚಿಗುರಿ ಇನ್ನೇನು ನೆಲ ಮುಟ್ಟುತ್ತದೆ ಎನ್ನುವಾಗ ಒಂದಿಷ್ಟು ಮಕ್ಕಳು ಬಂದು ಆ ಬೀಳಿಗೆ ಜೋತಾಡಿ ಕುಣಿದು ಕುಪ್ಪಳಿಸುವಾಗ ನನಗೆಷ್ಟು ಆತಂಕವಾಯ್ತು ಗೊತ್ತೇ? ನನ್ನ ಬೀಳುಗಳು ಮುರಿದುಹೋದಾವೆಂದಲ್ಲ ಆ ಮುದ್ದು ಮಕ್ಕಳು ಕೆಳಗೆ ಬಿದ್ದಾವೆಂದು!!! ಸಧ್ಯ!! ಹಾಗಾಗಲಿಲ್ಲ.

ಆ ಊರಿನ ಭಗ್ನಪ್ರೇಮಿಗಳಿಬ್ಬರು ನನ್ನ ಬೀಳುಗಳಿಗೆ ನೇಣು ಬಿಗಿದು ಪ್ರಾಣತೆತ್ತಾಗ. ಅದೆಷ್ಟು ದುಃಖವಾಯ್ತು. ಇಂದಿಗೂ ಅದ ನೆನೆದರೆ ಎದೆಯಲ್ಲಿ "ಚುಳುಕ್" ಎನ್ನದಿರುವುದಿಲ್ಲ ಆದರೆ ಕೆಲದಿನಗಳಲ್ಲಿಯೇ ನನಗೊಂದು ಆಘಾತ ಕಾದಿತ್ತು. ಆ ಊರಿನ ಭಗ್ನಪ್ರೇಮಿಗಳಿಬ್ಬರು ನನ್ನ ಬೀಳುಗಳಿಗೆ ನೇಣು ಬಿಗಿದು ಪ್ರಾಣತೆತ್ತಾಗ. ಅದೆಷ್ಟು ದುಃಖವಾಯ್ತು. ಇಂದಿಗೂ ಅದ ನೆನೆದರೆ ಎದೆಯಲ್ಲಿ "ಚುಳುಕ್" ಎನ್ನದಿರುವುದಿಲ್ಲ.

ಕಾಲಚಕ್ರ ಉರುಳಿತು, ವರ್ಷಗಳು ಕಳೆದಂತೆ ಅದೆಷ್ಟು ಲೆಕ್ಕವಿಲ್ಲದಷ್ಟು ಬದಲಾವಣೆಗಳಾದವು. ನನ್ನನ್ನು ಸಾಕಿ ಬೆಳೆಸಿದ ರೈತ ಅಸುನೀಗಿದ, ಅವನ ಸಮಾಧಿ ನನ್ನೊಡಲಲ್ಲೇ ಇದೆ ಅನ್ನುವುದು ನನಗೆ ಸಿಕ್ಕ ಅಲ್ಪತೃಪ್ತಿ. ಅವನ ಅನಂತರ ಆತನ ಮಕ್ಕಳು ನನ್ನನ್ನು ಬಹಳ ಪ್ರೀತಿ ಆದರಗಳಿಂದ ನೋಡಿಕೊಂಡರು. ನನ್ನ ಸುತ್ತಮುತ್ತಲಿದ್ದ ಹೊಲದಲ್ಲಿ ದನಕರುಗಳ ಆಸ್ಪತ್ರೆ ಕಟ್ಟಿಸಿದರು, ಆಸ್ಪತ್ರೆಗೆ ಬರುತ್ತಿದ್ದ ಜನ ದನಗಳಿಗೆ ನನ್ನ ನೆರಳೇ ಆಶ್ರಯ, ದಾರಿಹೋಕರಿಗೆ ನನ್ನೊಡಲ ತಂಪು ಬಹಳ ಹಿತ.



"ಹಾಂ!! ಅದೆಲ್ಲಾ ಬರೀ ನೆನಪು ಮಾತ್ರ!! ಆಧುನಿಕತೆಯ ದಾಳಿಗೆ ಸಿಲುಕಿ ನಾನು ಸಹ ನಲುಗಿಹೋದೆ. ನಂತರ ನನ್ನದೆಲ್ಲಾ ಕಣ್ಣೀರ ಕಥೆ. ನಾನೀಗ ಹೇಗಿದ್ದೇನೆ ಅಂತ ನೀವೆ ನೋಡಿ









ಇಂದಿನ ನನ್ನ ಸ್ಥಿತಿ
ನೀವೆ ಹೇಳಿ ನಾ ಮಾಡಿದ ತಪ್ಪೇನು?

ವಸೀಮನೂ ಅವನ 'ಖನಡ'ವೂ

ಮಾರ್ಚ್ ೨೭ ೨೦೦೭, ಇದು ನನ್ನ ಮತ್ತು ವಸೀಮ್ ಅಹಮ್ಮದ್ ಭೇಟಿಯಾದ ದಿನ. ಆ ದಿನ ನನಗೆ ಚೆನ್ನಾಗಿ ನೆನಪಿರಲು ಕಾರಣ ಅವನ ಕನ್ನಡ ಪದಗಳ ಉಚ್ಚಾರ.



"ಏನಯ್ಯ ವಸೀಮ್? ಕನ್ನಡ ಸರಿಯಾಗ್ ಮಾತಾಡಯ್ಯ" ಅಂತ ಯಾರಾದ್ರೂ ಈಗ ಕೇಳಿದ್ರೂ



"ಸರ್! ಯಾರ್ಗೆ ಹ್ಹೇಳಿದ್ದೂ? ಸರ್, ನಾಂಗೆ ಖನಾಡ ಬರಲ್ಲಾಂತಃ?'' ಎಂಬ ಮರುಪ್ರಶ್ನೆಯನ್ನು ಬಹಳ ಆತ್ಮವಿಶ್ವಾಸದಿಂದ ಎಸೆಯುತ್ತಾನೆ.



ಅವನ ಆ ಆತ್ಮವಿಶ್ವಾಸವೇ ಅವನನ್ನ ನಮ್ಮ ಕಂಪನಿಗೆ ಸೇರಿಸಿಕೊೞಲು ನನಗೆ ಪ್ರೇರೇಪಿಸಿ ಅವನನ್ನ ಆಯ್ಕೆಮಾಡಿದೆ. ಅದೂ ಅಲ್ಲದೆ ಕನ್ನಡಕ್ಕಿಂತ ನನಗೆ ವೈದ್ಯರಬಳಿ ನಮ್ಮ ಉತ್ಪನ್ನಗಳ ಬಗ್ಗೆ ಮಾತನಾಡಲು ಇಂಗ್ಲೀಷ್ ನ ಅವಶ್ಯಕತೆ ಸ್ವಲ್ಪ ಹೆಚ್ಚು, ಜೊತೆಗೆ ಅವನಿಗೂ ಕೂಡ ಕೆಲಸದ ಅನಿವಾರ್ಯತೆಯೂ ಇತ್ತು, ಅವನಿಗೂ ಕೆಲಸ ಕೊಟ್ಟರೆ ಅವನು ಮಾಡುತ್ತಾನೆ ಎಂಬ ನನ್ನ ನಂಬಿಕೆಯನ್ನು ಅವನು ಸಹ ಹುಸಿ ಮಾಡಲಿಲ್ಲ. ಇರಲಿ ಈಗ ವಿಷಯಕ್ಕೆ ಬರೋಣ.



ವಸೀಮ ತುಂಬಾ ಒೞೆಯ ಹುಡುಗ, ಯಾವುದೇ ದುರಬ್ಯಾಸಗಳಾಗಲಿ, ಸುೞು ಹೇಳುವ ಚಟವಾಗಲಿ, ಅವನ ವಯೋಸಹಜಗುಣವಾದ ಹುಡುಗಿಯರನ್ನು ರೇಗಿಸುವ ಚಾಳಿಯಾಗಲಿ ಇರಲಿಲ್ಲ. ಆದರೆ ನನಗೆ ಕುತೂಹಲವಿದ್ದದ್ದು ಅವನ ಕನ್ನಡ ಪದಗಳ ಉಚ್ಚಾರದಲ್ಲಿ!!! ಅವನ 'ಖನಡ' ವು ನನಗೆ ಅವನೊಡನೆ ಕೆಲಸಕ್ಕೆ ಹೋದಾಗಲೆಲ್ಲ ಕುತೂಹಲಭರಿತ ಅವಾಂತರಗಳನ್ನು ಸೃಷ್ಟಿಸಿವೆಯಲ್ಲದೆ, ಆ ಘಟನೆಗಳನ್ನು ಯಾವಾಗ ಮೆಲುಕು ಹಾಕಿದರೂ ಮನದ ಮೂಲೆಯಲ್ಲಿ ಕಚಗುಳಿ ಬರುವುದು ಖಂಡಿತ.



ಅಂತಹ ಈ ಒಂದು ಅನುಭವವನ್ನು ನೀವೇ ಓದಿ ನೋಡಿ..



ಅವನಷ್ಟೇ ಅಲ್ಲ ಮೈಸೂರು ಮತ್ತು ಬೆಂಗಳೂರು ಭಾಗದ ಬಹುತೇಕ ಮುಸಲ್ಮಾನರ ಕನ್ನಡ ನಮ್ಮ ವಸೀಮನ 'ಖನಡ'ದ ಹಾಗೆಯೇ ಇರುತ್ತದೆ. ಅಂದಮಾತ್ರಕ್ಕೆ ಸ್ವಚ್ಚ ಕನ್ನಡ ಮಾತನಾಡುವವರು ಇಲ್ಲವೆಂದರೆ ನಮ್ಮ ನಾಡಿನ ಸಾರಸ್ವತಲೋಕದ ದಿಗ್ಗಜರಾದ ಶ್ರೀಮಾನ್ ನಿಸಾರ್ ಅಹಮದ್, ಜಾನಪದ ಕವಿ ಕರೀಮ್ ಖಾನ್ ರಂಥವರಿಗೆ ಅವಮಾನ ಮಾಡಿದಂತಾಗುತ್ತದೆ, ಎಲ್ಲೋ ಕೆಲವರ ಉಚ್ಚಾರದಲ್ಲಿ ವ್ಯತಾಸವಿರುತ್ತದೆ. ಹಾಗಾಗಿ ಒಮ್ಮೆ ವಸೀಮನನ್ನೇ ಕೇಳಿದೆ



"ವಸೀಮ್ ನಂಗೆ ಒಂದ್ವಿಷ್ಯ ಅರ್ಥ ಆಗ್ಲಿಲ್ಲ, ನೀನು ಹುಟ್ಟಿ ಬೆಳದದ್ದು ಎಲ್ಲಾ ಮೈಸೂರಿನಲ್ಲೇ, ಆದ್ರೂ ನಿನ್ನ ಕನ್ನಡ ಯಾಕೆ ಹೀಗೆ?"



''ಸಾರ್! ಹೇನ್ ಮಾಡಾದು ನಮ್ಗೆ ಬಚಪನ್ ದಿಂದ ಬಂದ್ಬಿಟ್ಟಿ ಇಂಗೆ ಹಾಗೋಯ್ತು" ಎಂದ.



"ಹಾಗಾದ್ರೆ ನೀನು ಸ್ಕೂಲು ಕಾಲೇಜ್ನಲ್ಲಿ ಕನ್ನಡ ಹ್ಯಾಗ್ ಪಾಸ್ಮಾಡ್ದೆ ಮತ್ತೆ?" ಎಂದು ಕುತೂಹಲದಿಂದ ಕೇಳಿದೆ.



"ಸಾರ್! ನಮ್ಗೆ ಕಿರಿಷ್ಣಮೂರ್ತಿ ಅಂತ ಮೇಸ್ಟಾರ್ರು ಒಬ್ಬ್ರು ಇದ್ದ್ರು, ಅವರ್ಗೆ ಚೀಟಿ ಕೊಟ್ಟಿ ಎಕ್ಸಾಂದಲ್ಲಿ ಬರಿಸ್ಬಿಟ್ಟಿ ಪಾಸ್ ಮಾಡ್ಸಿದ್ದು" ಅಂದ ಅಷ್ಟೇ ಮುಗ್ದತೆಯಿಂದ.



ಸಧ್ಯ! ಅವನಿಗೂ ಕನ್ನಡ ಓದಲು ಬರೆಯಲು ಬರುತ್ತದಲ್ಲ ಎಂದು ನನಗೆ ಬಹಳ ಖುಷಿಯಾಯ್ತು. ಅದನ್ನು ಹೊರ ತೋರಿಸದೆ, ಅವನು ಕನ್ನಡವನ್ನು ಹೇಗೆ ಓದುತ್ತಾನೆ ನೋಡೋಣವೆನ್ನಿಸಿ ಆ ತಕ್ಷಣಕ್ಕೆ ಎದುರು ಬಂದ ಆಟೋ ಹಿಂದೆ ಬರೆದಿದ್ದ ಒಂದು ಚಿತ್ರದ ಹೆಸರು ನೋಡಿ



" ಸರಿ ವಸೀಮ್!! ಆ ಆಟೋ ಮೇಲಿರೋದ್ನ ಓದು ನೋಡೋಣ್" ಅಂದೆ



"ಹಷ್ಟೇನಾ ಸಾರ್! " ಎಂದು ಆಟೋ ಕಡೆ ಕಣ್ಣೊರಳಿಸಿ



" ಅಮ್ಮ ತಾಯಿಧೇರೇ" ಅಮ್ದು ಬಿಡೋದೇ!!!



ಆ ಕ್ಷಣದಲ್ಲಿ ನಾನು ಮೂರ್ಚೆ ಬಂದು ಕೆಳಗೆ ಬೀಳುವಂತಾಗುವುದರ ಜೊತೆಗೆ ಹೊಟ್ಟೆ ಹುಣ್ಣಾಗುವಷ್ಟು ನಗು ವತ್ತರಿಸಿ ಬಂತು.



ಏಕೆಂದರೆ ಆಟೋ ಮೇಲಿದ್ದದ್ದು ನಾಗತೀಹೞಿ ಯವರು ನಿರ್ದೇಶಿಸಿರುವ "ಅಮೃತ ಧಾರೆ" ಚಿತ್ರದ ಹೆಸರು



ಅದೇ ಮೊದಲು ಅದೇ ಕೊನೆ ಇಂದಿಗೂ ನಮ್ಮ ವಸೀಮನ 'ಖನಡ" ನನಗೆ ಪ್ರಶ್ನಾತೀತ

ವಸೀಮನೂ ಅವನ 'ಖನಡ'ವೂ

ಮಾರ್ಚ್ ೨೭ ೨೦೦೭, ಇದು ನನ್ನ ಮತ್ತು ವಸೀಮ್ ಅಹಮ್ಮದ್ ಭೇಟಿಯಾದ ದಿನ. ಆ ದಿನ ನನಗೆ ಚೆನ್ನಾಗಿ ನೆನಪಿರಲು ಕಾರಣ ಅವನ ಕನ್ನಡ ಪದಗಳ ಉಚ್ಚಾರ.



"ಏನಯ್ಯ ವಸೀಮ್? ಕನ್ನಡ ಸರಿಯಾಗ್ ಮಾತಾಡಯ್ಯ" ಅಂತ ಯಾರಾದ್ರೂ ಈಗ ಕೇಳಿದ್ರೂ



"ಸರ್! ಯಾರ್ಗೆ ಹ್ಹೇಳಿದ್ದೂ? ಸರ್, ನಾಂಗೆ ಖನಾಡ ಬರಲ್ಲಾಂತಃ?'' ಎಂಬ ಮರುಪ್ರಶ್ನೆಯನ್ನು ಬಹಳ ಆತ್ಮವಿಶ್ವಾಸದಿಂದ ಎಸೆಯುತ್ತಾನೆ.



ಅವನ ಆ ಆತ್ಮವಿಶ್ವಾಸವೇ ಅವನನ್ನ ನಮ್ಮ ಕಂಪನಿಗೆ ಸೇರಿಸಿಕೊೞಲು ನನಗೆ ಪ್ರೇರೇಪಿಸಿ ಅವನನ್ನ ಆಯ್ಕೆಮಾಡಿದೆ. ಅದೂ ಅಲ್ಲದೆ ಕನ್ನಡಕ್ಕಿಂತ ನನಗೆ ವೈದ್ಯರಬಳಿ ನಮ್ಮ ಉತ್ಪನ್ನಗಳ ಬಗ್ಗೆ ಮಾತನಾಡಲು ಇಂಗ್ಲೀಷ್ ನ ಅವಶ್ಯಕತೆ ಸ್ವಲ್ಪ ಹೆಚ್ಚು, ಜೊತೆಗೆ ಅವನಿಗೂ ಕೂಡ ಕೆಲಸದ ಅನಿವಾರ್ಯತೆಯೂ ಇತ್ತು, ಅವನಿಗೂ ಕೆಲಸ ಕೊಟ್ಟರೆ ಅವನು ಮಾಡುತ್ತಾನೆ ಎಂಬ ನನ್ನ ನಂಬಿಕೆಯನ್ನು ಅವನು ಸಹ ಹುಸಿ ಮಾಡಲಿಲ್ಲ. ಇರಲಿ ಈಗ ವಿಷಯಕ್ಕೆ ಬರೋಣ.



ವಸೀಮ ತುಂಬಾ ಒೞೆಯ ಹುಡುಗ, ಯಾವುದೇ ದುರಬ್ಯಾಸಗಳಾಗಲಿ, ಸುೞು ಹೇಳುವ ಚಟವಾಗಲಿ, ಅವನ ವಯೋಸಹಜಗುಣವಾದ ಹುಡುಗಿಯರನ್ನು ರೇಗಿಸುವ ಚಾಳಿಯಾಗಲಿ ಇರಲಿಲ್ಲ. ಆದರೆ ನನಗೆ ಕುತೂಹಲವಿದ್ದದ್ದು ಅವನ ಕನ್ನಡ ಪದಗಳ ಉಚ್ಚಾರದಲ್ಲಿ!!! ಅವನ 'ಖನಡ' ವು ನನಗೆ ಅವನೊಡನೆ ಕೆಲಸಕ್ಕೆ ಹೋದಾಗಲೆಲ್ಲ ಕುತೂಹಲಭರಿತ ಅವಾಂತರಗಳನ್ನು ಸೃಷ್ಟಿಸಿವೆಯಲ್ಲದೆ, ಆ ಘಟನೆಗಳನ್ನು ಯಾವಾಗ ಮೆಲುಕು ಹಾಕಿದರೂ ಮನದ ಮೂಲೆಯಲ್ಲಿ ಕಚಗುಳಿ ಬರುವುದು ಖಂಡಿತ.



ಅಂತಹ ಈ ಒಂದು ಅನುಭವವನ್ನು ನೀವೇ ಓದಿ ನೋಡಿ..



ಅವನಷ್ಟೇ ಅಲ್ಲ ಮೈಸೂರು ಮತ್ತು ಬೆಂಗಳೂರು ಭಾಗದ ಬಹುತೇಕ ಮುಸಲ್ಮಾನರ ಕನ್ನಡ ನಮ್ಮ ವಸೀಮನ 'ಖನಡ'ದ ಹಾಗೆಯೇ ಇರುತ್ತದೆ. ಅಂದಮಾತ್ರಕ್ಕೆ ಸ್ವಚ್ಚ ಕನ್ನಡ ಮಾತನಾಡುವವರು ಇಲ್ಲವೆಂದರೆ ನಮ್ಮ ನಾಡಿನ ಸಾರಸ್ವತಲೋಕದ ದಿಗ್ಗಜರಾದ ಶ್ರೀಮಾನ್ ನಿಸಾರ್ ಅಹಮದ್, ಜಾನಪದ ಕವಿ ಕರೀಮ್ ಖಾನ್ ರಂಥವರಿಗೆ ಅವಮಾನ ಮಾಡಿದಂತಾಗುತ್ತದೆ, ಎಲ್ಲೋ ಕೆಲವರ ಉಚ್ಚಾರದಲ್ಲಿ ವ್ಯತಾಸವಿರುತ್ತದೆ. ಹಾಗಾಗಿ ಒಮ್ಮೆ ವಸೀಮನನ್ನೇ ಕೇಳಿದೆ



"ವಸೀಮ್ ನಂಗೆ ಒಂದ್ವಿಷ್ಯ ಅರ್ಥ ಆಗ್ಲಿಲ್ಲ, ನೀನು ಹುಟ್ಟಿ ಬೆಳದದ್ದು ಎಲ್ಲಾ ಮೈಸೂರಿನಲ್ಲೇ, ಆದ್ರೂ ನಿನ್ನ ಕನ್ನಡ ಯಾಕೆ ಹೀಗೆ?"



''ಸಾರ್! ಹೇನ್ ಮಾಡಾದು ನಮ್ಗೆ ಬಚಪನ್ ದಿಂದ ಬಂದ್ಬಿಟ್ಟಿ ಇಂಗೆ ಹಾಗೋಯ್ತು" ಎಂದ.



"ಹಾಗಾದ್ರೆ ನೀನು ಸ್ಕೂಲು ಕಾಲೇಜ್ನಲ್ಲಿ ಕನ್ನಡ ಹ್ಯಾಗ್ ಪಾಸ್ಮಾಡ್ದೆ ಮತ್ತೆ?" ಎಂದು ಕುತೂಹಲದಿಂದ ಕೇಳಿದೆ.



"ಸಾರ್! ನಮ್ಗೆ ಕಿರಿಷ್ಣಮೂರ್ತಿ ಅಂತ ಮೇಸ್ಟಾರ್ರು ಒಬ್ಬ್ರು ಇದ್ದ್ರು, ಅವರ್ಗೆ ಚೀಟಿ ಕೊಟ್ಟಿ ಎಕ್ಸಾಂದಲ್ಲಿ ಬರಿಸ್ಬಿಟ್ಟಿ ಪಾಸ್ ಮಾಡ್ಸಿದ್ದು" ಅಂದ ಅಷ್ಟೇ ಮುಗ್ದತೆಯಿಂದ.



ಸಧ್ಯ! ಅವನಿಗೂ ಕನ್ನಡ ಓದಲು ಬರೆಯಲು ಬರುತ್ತದಲ್ಲ ಎಂದು ನನಗೆ ಬಹಳ ಖುಷಿಯಾಯ್ತು. ಅದನ್ನು ಹೊರ ತೋರಿಸದೆ, ಅವನು ಕನ್ನಡವನ್ನು ಹೇಗೆ ಓದುತ್ತಾನೆ ನೋಡೋಣವೆನ್ನಿಸಿ ಆ ತಕ್ಷಣಕ್ಕೆ ಎದುರು ಬಂದ ಆಟೋ ಹಿಂದೆ ಬರೆದಿದ್ದ ಒಂದು ಚಿತ್ರದ ಹೆಸರು ನೋಡಿ



" ಸರಿ ವಸೀಮ್!! ಆ ಆಟೋ ಮೇಲಿರೋದ್ನ ಓದು ನೋಡೋಣ್" ಅಂದೆ



"ಹಷ್ಟೇನಾ ಸಾರ್! " ಎಂದು ಆಟೋ ಕಡೆ ಕಣ್ಣೊರಳಿಸಿ



" ಅಮ್ಮ ತಾಯಿಧೇರೇ" ಅಮ್ದು ಬಿಡೋದೇ!!!



ಆ ಕ್ಷಣದಲ್ಲಿ ನಾನು ಮೂರ್ಚೆ ಬಂದು ಕೆಳಗೆ ಬೀಳುವಂತಾಗುವುದರ ಜೊತೆಗೆ ಹೊಟ್ಟೆ ಹುಣ್ಣಾಗುವಷ್ಟು ನಗು ವತ್ತರಿಸಿ ಬಂತು.



ಏಕೆಂದರೆ ಆಟೋ ಮೇಲಿದ್ದದ್ದು ನಾಗತೀಹೞಿ ಯವರು ನಿರ್ದೇಶಿಸಿರುವ "ಅಮೃತ ಧಾರೆ" ಚಿತ್ರದ ಹೆಸರು



ಅದೇ ಮೊದಲು ಅದೇ ಕೊನೆ ಇಂದಿಗೂ ನಮ್ಮ ವಸೀಮನ 'ಖನಡ" ನನಗೆ ಪ್ರಶ್ನಾತೀತ