ಶುಕ್ರವಾರ, ಮೇ 21, 2010

ಪ್ರಚಾರದ ಹುಚ್ಚು ಮತ್ತು ನಮ್ಮ ಮಂತ್ರಿಗಳೆಂಬ ಮಂದ ಮತಿಗಳು!!!

ಏನಾಗಿದೆ ನಮ್ಮ ಮಂತ್ರಿ ಮಹೋದಯರಿಗೆ? ಮೊನ್ನೆ ಮೊನ್ನೆ ತಾನೆ ವಿದೇಶಾಂಗ ಸಚಿವ ಶಶಿ ತರೂರ‍್ ಅಂತೂ ತನ್ನದೇ ಆದ ಸರ್ಕಾರದ ನೀತಿಗಳ ಬಗ್ಗೆ ಅಂತೂ ಬಾಯಿಗೆ ಬಂದತದ್ದನ್ನು ಒದರಿ ಬಣ್ಣಗೇಡಿ ಯಾದದ್ದು ಎಲರಿಗೂ ತಿಳಿದದ್ದೆ. ಅದೇ ರೀತಿ ವಾಣಿಜ್ಯ ಸಚಿವ ಕಮಲ್ ನಾಥ್ ಮತ್ತು ಚಿದಂಬರಂ ನಡುವಿನ ವಿರಸ, ದೂರ ಸಂಪರ್ಕ ಸಚಿವ ರಾಜಾ ರವರ ರಗಳೆ ಒಂದೇ ಎರಡೇ? ಹೇಳುತ್ತಾ ಹೋದರೆ ಮುಗಿಯುವುದಿಲ್ಲವೇನೋ ಅನ್ನಿಸುತ್ತದೆ. ಅಂದಹಾಗೆ ಇದು ಬರೀ ಈಗಿನ ಸರ್ಕಾರದ್ದಷ್ಟೇ ಸಮಸ್ಯೆಯಲ್ಲ. ಬಿ.ಜೆ.ಪಿ ಸರ್ಕಾರದಲ್ಲಿ ಜಸ್ವಂಸಿಂಗ್ ಮತ್ತಿ ಎಲ್. ಕೆ. ಅಡ್ವಾಣಿ ಯವರ ವಿರಸವಂತೂ ಭಾರಿ ಜನಜನಿತ. ಇನ್ನು ಜನತಾಪರಿವಾರದ ಸರ್ಕಾರವಿದ್ದಾಗಲಂತೂ ಎಲ್ಲರೂ ಪ್ರಧಾನಮಂತ್ರಿಗಳೇ. ಇವತ್ತಿಗೆ ಹೊಸ ಸೇರ್ಪಡೆ ನಮ್ಮ ಕನ್ನಡಿಗರೇ ಆದ ಶ್ರಿ ಜೈರಾಂರಮೆಶ್ ರವರು ಅಷ್ಟೆ.
ತಾವೊಂದು ತುಂಬಾ ಜವಾಬ್ದಾರಿಯುತ ಸ್ಥಾನದಲ್ಲಿದ್ದೇವೆ, ನಮ್ಮ ಮಾತುಗಳನ್ನಾಗಲಿ, ನಮ್ಮ ನಡತೆಯನ್ನಾಗಲಿ ನಮ್ಮದೇಶವಷ್ಟೇ ಅಲ್ಲ, ಇಡೀ ಪ್ರಪಂಚವೇ ಗಮನಿಸುತ್ತದೆ, ಅಷ್ಟೇ ಅಲ್ಲ ನಮ್ಮ ಮಾತುಗಳು ನಮ್ಮ ದೇಶದ ಘನತೆಯನ್ನು ಗೌರವವನ್ನು ಕಾಪಾಡಬಲ್ಲವು/ ಹರಾಜು ಸಹ ಹಾಕಬಲ್ಲವು ಎಂಬ ಪರಿಜ್ನಾನವೂ ಇಲ್ಲದೇ ಆಚಾರವಿಲ್ಲದ ನಾಲಗೆಯನ್ನು ಹರಿಯಬಿಡುತ್ತಾರೆ. ಆಚಾರಮುಖ್ಯವಲ್ಲ ಪ್ರಚಾರ ಬೇಕೆನ್ನುವ ಜಾತಿಯವರು, ಇವರು ಮಾತನಾಡುವ ರೀತಿ ನೋಡಿದವರಾರಿಗಾದರೂ ಇವರ ಪ್ರಚಾರದ ಹುಚ್ಚು ಅರ್ಥವಾದೀತು.
ಈಗ ಜೈರಾಂರಮೇಶ್ ಮತ್ತೊಮ್ಮೆ ಮಾಡಿರುವುದನ್ನು ಅದನ್ನೇ. ಇದೇನು ಅವರಿಗೆ ಹೊಸತಲ್ಲ, ಮೊನ್ನೆ, ಮೊನ್ನೆ ಯಾವುದೋ ವಿಶ್ವವಿದ್ಯಾನಿಲಯದ ಘಟಿಕೋತ್ಸವವೊಂದರಲ್ಲಿ ಭಾಷಣ ಮಾಡುವ ಮುನ್ನ ತಾವೇನೋ ಭಾರಿ ಸಮಾಜಸುಧಾರಕ, ಚಿಂತಕ ಎಂದು ತೋರಿಸುವ ಭರದಲ್ಲಿ ಪಾಪ ವಿಶ್ವವಿದ್ಯಾನಿಲಯದವರು ತೊಡಿಸಿದ್ದ ಗೌನನ್ನು ಕಿತ್ತೊಗೆದು
"ನನಗೆ ಇನ್ನೂ ದಾಸ್ಯದಲ್ಲಿರಲು ಇಷ್ಟವಿಲ್ಲ ಅದಕ್ಕೆ ಗೌನನ್ನು ಕಿತ್ತೊಗೆಯುತ್ತಿದ್ದೇನೆ" ಅಂತ ಪೋಸು ಕೊಟ್ಟರು. ಆದರೆ
"ಅಯ್ಯೋ ಅವಯ್ಯುಂಗೆ ಸೆಕೆಆಯ್ತಂತೆ ಅದ್ಕೆ ಗೌನ್ ಕಿತ್ತಾಕಿ ಶೋ ಕೊಡ್ತಾವ್ರೆ" ಅಂತ ಅಕ್ಕಪಕ್ಕದವರು ಮಾತನಾಡಿಕೊಂಡಿದ್ದು ಸಾಹೇಬರ ಕಿವಿಗೆ ಬೀಳಲೇಇಲ್ಲ. ಆದರೂ ತಮ್ಮ ಎಲುಬಿಲ್ಲದ ನಾಲಿಗೆಯನ್ನು ಕೋಪನ್ ಹೇಗನ್ ನ ಜಾಗತಿಕ ತಾಪಮಾನದಲ್ಲಿ ಮತ್ತೂ ಹೊರಳಾಡಿಸಿದರು. ಅಲ್ಲಿ ನಮ್ಮ ದೇಶದ ಗೌರವಕ್ಕೆ ಹೇಳಿಕೊಳ್ಳುವಂತಹ ಧಕ್ಕೆಯೇನೂ ಆಗದಿದ್ದರೂ ಅವರ ಮಾತಿನ ಮಹತ್ವದ ಅರಿವು ಜಗಜ್ಜಾಹೀರಾಯ್ತು.
ಇಂದು ವಿಚಾರವಂತರಿಗಿಂತ ಪ್ರಚಾರವಂತರಿಗೆ ಹೆಚ್ಚು ಬೆಲೆ ಕೊಡುವ ಕಾಲ ಬಂದಿದೆ. ಹಿಂದೆ ಒೞೆ ಕೆಲಸ ಮಾಡಿದ್ರೆ ಒೞೆ ಹೆಸರು, ಪ್ರಚಾರ ಸಿಗ್ತಿತ್ತು. ಕೆಟ್ಟ ಕೆಲಸ ಮಾಡಿದ್ರೆ ಸ್ಥಾನ ಹಾಗೂ ಮಾನ ಎರಡೂ ಹೋಗ್ತಿತ್ತು. ಈಗ ಕಾಲ ಬದಲಾಗಿದೆ - ಏನೇ ಆಗ್ಲಿ, ಪ್ರಚಾರ ಬೇಕು - ಮಾಧ್ಯಮದವರಿಗೂ ಅಶ್ಟೆ- ತಮ್ಮ ಚಾನಲ್ಗಳ TRP ಹೆಚ್ಚಿಸಲು ಇಂತಹವರ 'soundbites' ಗಳೇ ಬೇಕು. ಕಾಲಾಯ ತಸ್ಮೈ ನಮಹಃ.....
ಈ ಮಾಧ್ಯಮಗಳಿಗೂ ಅಷ್ಟೇ ಇಂತವರ ವಿಚಾರಗಳನ್ನು ಮತ್ತೆ ಮತ್ತೆ ಪ್ರಕಟಿಸಿ ದೇಶದ ಮಾನ ಕಳೆಯುವೌದರಲ್ಲಿ ಎತ್ತಿದ ಕೈ.
ಅತಿ ಪ್ರಾಮಾಣಿಕ, ಬುಧ್ಧಿವಂತ, ವಿವೇಕಿ ಎಂದು ಹೆಸರು ಪಡೆದಿರುವ ಜೈರಾಮ್ ರಮೇಶ್ ಇಂಥ ಮುಜುಗರದ ಸನ್ನಿವೇಶ ತಂದು ಒಡ್ಡುತ್ತಾರೆ ಅಂತ ಅಂದುಕೊಂಡಿರಲಿಲ್ಲ. ಚೀನಾ ಬಗೆಗಿನ ಅವರ ಸೌಮ್ಯ ನೀತಿ ಎಲ್ಲರಿಗೂ ತಿಳಿದದ್ದೇ. ಅದು ಅವರ ಪುಸ್ತಕ " Making Sense of Chindia " ದಲ್ಲಿ ವ್ಯಕ್ತವಾಗಿದೆ. ಆದರೆ ಅವರ ಈ ವರ್ತನೆ ಅಸಮಾಧಾನಕರ.
ಹೋಗಲಿಲಿ ಅಂತಾ ಸುಮ್ಮನಿದ್ದರೆ ಇಂದು ಬೆಳಿಗ್ಗೆ ಅವರು ಚೀನಾ ಭೇಟಿಯವೇಳೆ ಉದುರಿಸಿದ್ದ ಅಣಿಮುತ್ತುಗಳು ಬಹಿರಂಗವಾಗಿವೆ. "ನಮ್ಮ ದೇಶದ ಗೃಹ ಇಲಾಖೆ ನಾಲಾಯಕ್ಕು, ಅದಕ್ಕೆ ಬುದ್ದಿಭ್ರಮಣೆಯಾಗಿದೆ" ಇತ್ಯಾದಿ, ಇತ್ಯಾದಿಯಾಗಿ ಮಾತನಾಡಿರುವುದು ಬೇರೆಲ್ಲೂ ಅಲ್ಲ. ಅದೂ ನಮ್ಮ ಮೇಲೆರಗಲು ಕಾಯುತ್ತಿರುವ ದೇಶದಲ್ಲಿ . ಅಲ್ಲಿ ಇಂತಹ ಮಾತುಗಳನ್ನಾಡಿದರೆ ಏನಾಗಿತ್ತದೆ ಎಂಬ ಸಣ್ಣ ಅರಿವೂ ಇಲ್ಲದ ಬುದ್ದಿಗೇಡಿಯೊಬ್ಬರನ್ನು ಒಂದು ಜವಾಬ್ದಾರಿಯುತ ಜಾಗದಲ್ಲಿ ಕೂರಿಸಿರುವ ನಾವೇ ಪುಣ್ಯವಂತರಲ್ಲವೇ?

ಇನಾದರೂ ತಾವು ಮಾತನಾಡುವಾಗ ಎಚ್ಚರವಹಿಸಿಮಾತನಾಡಿದರೆ ಒಳ್ಳೆಯದಲ್ಲವೇ? ರಮೇಶ್ ಸರ್.

ನುಡಿದರೆ ಮುತ್ತಿನ ಹಾರದಂತಿರಬೇಕು

ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು

ಎಂಬ ನಿಮ್ಮದೇ ನಾಡಿನ ಶರಣರು ಹೇಳಿದ್ದು ಬಹುಶಃ ಮರೆತುಹೋಯ್ತೇ?

ನಿಮಗಎಲ್ಲಿ ಗೊತ್ತಿರಬೇಕು ವಚನಗಳು, ಎಷ್ಟೇ ಆಗಲಿ ವಿದೇಶದಲ್ಲಿ ಕಲಿತವರಲ್ಲವೇ ನೀವು

ಕಾಮೆಂಟ್‌ಗಳಿಲ್ಲ: